ಪುತ್ತೂರಿನ ಉಪ್ಪಿನಂಗಡಿಯಲ್ಲಿ ಬೃಹತ್ ಹಿಂದೂ ಸಮಾಜೋತ್ಸವ ನಡೆಯಿತು.ಸಾವಿರಾರು ಸಂಖ್ಯೆಯಲ್ಲಿ ಜನರು ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.ಸಮಾವೇಶಕ್ಕೂ ಮೊದಲು ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದಿಂದ ಬೃಹತ್ ಶೋಭಾಯಾತ್ರೆಯು ನಡೆಯಿತು.ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣಪ್ರಾಂತ್ಯ ಕಾರ್ಯವಾಹಕ ಪ್ರಭಾಕರ್ ಭಟ್ ಕಲ್ಲಡ್ಕ ಹಿಂದೂ ಧರ್ಮದ ಎಲ್ಲಾ ಜಾತಿಗಳು ಒಂದಾಗುವ ಮೂಲಕ ಒಗ್ಗಟ್ಟನ್ನು ಪ್ರದರ್ಶಿಸುವ ಕಾರ್ಯನಡೆಯಬೇಕಿದೆ ಎಂದರು. ಸಮಾರಂಭದಲ್ಲಿ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ,ಕನ್ಯಾಡಿಯ ಬ್ರಹ್ಮಾನಂದ ಸ್ವಾಮೀಜಿಗಳು ಆಶೀರ್ವಚನವನ್ನು ನೀಡಿದರು.
No comments:
Post a Comment