Tuesday, 20 August 2013


ಭಾರತದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯನ್ನು ಉಪಕರ್ಮ ಎಂದು ಬಹಳ ಪ್ರಾಚೀನ ಕಾಲದಿಂದಲೂ ಆಚರಿಸಿಕೊಂಡು ಬರಲಾಗುತ್ತದೆ.ಈ ದಿನಕ್ಕೆ ಇನ್ನೊಂದು ವಿಶೆಷವೇ ರಕ್ಷಾಬಂದನ. ರಕ್ಷಾಬಂಧನ ಎಂದ ಕೂಡಲೇ ನೆನೆಪಾಗುವುದು ಅಣ್ಣ ತಂಗಿಯರ ಸಂಬಂಧ ಸಹೋದರತೆಯ ಪ್ರೇಮ. ಅಣ್ಣ ತಂಗಿಯರ ಭಾವನಾತ್ಮಕವಾಗಿ ಸ್ಮರಿಸುವ ಈ ದಿನದ ಬಾಲ್ಯದ ಅನೇಕ ಸಿಹಿಕಹಿ ನೆನಪುಗಳನ್ನು ಮನಸ್ಸಿನ ಮೂಲೆಯಲ್ಲಿ ಮೂಡಿಸುತ್ತದೆ.ಈ ರಕ್ಷಾ ಬಂಧನ ಈ ಹಬ್ಬಕ್ಕೆ   ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ವಿಶೇಷಮಹತ್ವವಿದೆ. 
ಪ್ರತಿಯೊಬ್ಬ ಸಹೋದರಿಯು ಸಮಾಜದ ದುಷ್ಟಶಕ್ತಿಗಳಿಂದ ರಕ್ಷಿಸಲೆಂದು ತನ್ನ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟುತ್ತಾಳೆ. ಪ್ರತಿಯೊಬ್ಬ ಸಹೋದರನೂ ಈ ಸಮಯದಲ್ಲಿ ಸಹೋದರಿಯೆಡೆಗೆ ತನ್ನ ಭ್ರಾತೃತ್ವ ಪ್ರೇಮವನ್ನು ಉಜ್ವಲಗೊಳಿಸಬೇಕೆಂಬುದು ಈ ರಕ್ಷಾಬಂಧನ ಹಬ್ಬದ ನೀತಿಯಾಗಿದೆ. 

No comments:

Post a Comment

Vivekananda THENKILA 2025 ಪುತ್ತೂರು ವಿವೇಕಾನಂದ ಶಾಲೆಯಲ್ಲಿ ಸಾಂಪ್ರದಾಯಿಕ ಶೈಲಿಯ...

ಪುತ್ತೂರು ವಿವೇಕಾನಂದ ಶಾಲೆಯಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ  ಶಾಲಾಪ್ರಾರಂಭೋತ್ಸವ.. ದಕ್ಷಿಣಕನ್ನಡ: ರಾಜ್ಯದೆಲ್ಲೆಡೆ ಇಂದಿನಿಂದ ಶಾಲೆಗಳು ಪ್ರಾರಂಭಗೊಂಡಿದೆ. ವಿವಿಧ ಶಾಲ...