ಪುತ್ತೂರು ತೆಂಕಿಲ ಗೌಡ ಸಮುದಾಯ ಭವನದಲ್ಲಿ ನಡೆದ ಗುರುವಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ.ಪತ್ರಕರ್ತರೊಂದಿಗೆ ಮಾತನಾಡಿದರು. ಹಿಂದಿನ ಸಕರ್ಾರದಂತೆ ಹೊಸ ಆಶ್ವಾಸನೆ ನೀಡುವ ಬದಲು, ಇರುವ ಯೋಜನೆಯನ್ನೇ ಸುಧಾರಿಸುವ ಕಾರ್ಯಕ್ಕೆ ಕೇಂದ್ರ ಸಕರ್ಾರ ಮುಂದಾಗಿದೆ. ಅದರಂತೆ ರೈಲ್ವೇ ಸುಧಾರಣೆಗೆ ರಾಜ್ಯ ಸಕರ್ಾರ ಶೇ.50ರಷ್ಟು ಅನುದಾನ ನೀಡಬೇಕು. ಹಾಗೂ ಅವಶ್ಯಕ ಜಾಗವನ್ನು ಮಂಜೂರು ಮಾಡಬೇಕು ಎಂಬ ನಿಯಮ ಮೊದಲೇ ರೂಪಿಸಲಾಗಿತ್ತು. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದು, ಶೇ.50ರಷ್ಟು ಅನುದಾನ ನೀಡಲು ಕಷ್ಟಸಾಧ್ಯ ಎಂದು ತಿಳಿಸಿದ್ದಾರೆ. ಈ ವಿಚಾರವನ್ನು ರಾಜಕೀಯ ಮಾಡಲು ಇಚ್ಚೆ ಪಡುವುದಿಲ್ಲ. ಆದ್ದರಿಂದ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ವಿಚಾರ ತಿಳಿಸಿದ್ದೇನೆ. ಕೇಂದ್ರ ರೈಲ್ವೇ ಖಾತೆ, ಹೊಸ ಅನುದಾನಗಳನ್ನು ನಿರೀಕ್ಷಿಸುವುದಿಲ್ಲ. ಇರುವ ಅನುದಾನವನ್ನೇ ಮುಂದುವರಿಸುವಂತೆ ಕೇಳಿಕೊಂಡಿದೆ ಎಂದು ತಿಳಿಸಿದರು.
ತೆಲಂಗಾಣದಲ್ಲಿ ನಡೆದ ರೈಲು ದುರಂತದ ಬಗ್ಗೆ ವಿಷಾದವಿದೆ. ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಲಾಗುವುದು. ದೇಶದಲ್ಲಿ ಸಾವಿರಕ್ಕೂ ಹೆಚ್ಚು ಮಾನವರಹಿತ ಲೆವೆಲ್ ಕ್ರಾಸಿಂಗ್ ಇರುವುದನ್ನು ಪತ್ತೆ ಹಚ್ಚಲಾಗಿದೆ. ಅಧಿಕಾರಿಗಳ ಬಳಿ ಚಚರ್ಿಸಿ ಇದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು. ಎಲ್ಲಾ ಸಂಸದರ ಸಲಹೆಯನ್ನು ಪಡೆದುಕೊಳ್ಳಲಾಗುವುದು. ಹಾಗೂ ಈ ವಾರದಲ್ಲಿ ನಡೆಯುವ ಸಭೆಯಲ್ಲಿ, ಸಂಸದರ ಅನುದಾನವನ್ನು ಬಿಡುಗಡೆ ಮಾಡುವಂತೆ ಕೇಳಿಕೊಳ್ಳಲಾಗುವುದು ಎಂದರು.
ಪುತ್ತೂರು ರೈಲ್ವೇ ನಿಲ್ದಾಣವನ್ನು ಮಾದರಿ ರೈಲ್ವೇ ನಿಲ್ದಾಣವನ್ನಾಗಿ ರೂಪಿಸುವ ಯೋಜನೆ ಇದೆ. ಮುಂದಿನ ಒಂದೂವರೆ ವರ್ಷಗಳಲ್ಲಿ ಪುತ್ತೂರು ರೈಲ್ವೇ ನಿಲ್ದಾಣವನ್ನು ನಂ.1 ನಿಲ್ದಾಣವನ್ನಾಗಿ ಪರಿವತರ್ಿಸಲಾಗುವುದು. ಇದಕ್ಕೆ ಸಂಬಂಧಪಟ್ಟ ಡಿಆರ್ಎಂಓಗಳ ಸಭೆ ಕರೆದು ಚಚರ್ೆ ನಡೆಸಿದ್ದೇನೆ. ಅಲ್ಲದೇ, ಪುತ್ತೂರು ರೈಲ್ವೇ ನಿಲ್ದಾಣ ಸಂಪಕರ್ಿಸುವ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಡಿ.ವಿ.ಸದಾನಂದ ಗೌಡ ಹೇಳಿದರು.
ಹಸ್ತಕ್ಷೇಪ ಇಲ್ಲ:
ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಂಜೂರು ಮಾಡಿದ್ದ ಕೊಲ ಪಶುವೈದ್ಯಕೀಯ ಕಾಲೇಜು ಹಾಗೂ ಕಾವು ರಬ್ಬರ್ ಕಾಖರ್ಾನೆಗೆ ಸಂಬಂಧಪಟ್ಟಂತೆ ಮುಂದಿನ ಕೆಲಸವನ್ನು ರಾಜ್ಯ ಸಕರ್ಾರ ಮಾಡಬೇಕಿದೆ. ಪಶುವೈದ್ಯಕೀಯ ಕಾಲೇಜಿಗೆ 20 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿತ್ತು. ಎಲ್ಲಾ ಕೆಲಸಗಳು ಪ್ರಗತಿಯಲ್ಲಿತ್ತು. ರಬ್ಬರ್ ಕಾಖರ್ಾನೆಗೆ ಪ್ರಾಥಮಿಕ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು. ಅಷ್ಟರಲ್ಲಿ ರಾಜ್ಯ ಸಕರ್ಾರ ಬದಲಾದದ್ದರಿಂದ, ಮುಂದಿನ ಕೆಲಸವನ್ನು ನಡೆಸಲು ಸಾಧ್ಯವಾಗಿಲ್ಲ. ಅಧಿಕಾರದಿಂದ ಕೆಳಗಿಳಿದ ಮೇಲೆ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.