Wednesday, 23 March 2016

ಪುತ್ತೂರು ದೇವಾಲಯದ ಆಹ್ವಾನ ಪತ್ರ ವಿವಾದ ಹೈಕೋರ್ಟ್ ಮೆಟ್ಟಿಲೇರಿದೆ




ಪುತ್ತೂರು ದೇವಾಲಯದ ಆಹ್ವಾನ ಪತ್ರ ವಿವಾದ ಹೈಕೋರ್ಟ್ ಮೆಟ್ಟಿಲೇರಿದೆ. ಇನ್ನೊಂದೆಡೆ, ಪುತ್ತೂರಿನಲ್ಲಿ ಹಿಂದೂ ಸಂಘಟನೆಗಳ ನಾಯಕರು ಸಾಮೂಹಿಕ ಪ್ರಾರ್ಥನೆ ನಡೆಸುವ ಮೂಲಕ ತಮ್ಮ ಹೋರಾಟವನ್ನು ಜೀವಂತವಾಗಿರಿಸಿದ್ದಾರೆ.
ಪುತ್ತೂರು ಸಂಘ ಪರಿವಾರದ ನಾಯಕ ನವೀನ್ ಎಂಬವರು ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ಇಂದು ವಿಚಾರಣೆಗೆ ಎತ್ತಿಕೊಳ್ಳಲಿದೆ. ದೇವಾಲಯದ ಆಹ್ವಾನಪತ್ರದಲ್ಲಿ ಜಿಲ್ಲಾಧಿಕಾರಿ ಇಬ್ರಾಹಿಂ ಅವರ ಹೆಸರನ್ನು ತೆಗೆಯುವಂತಾಗಬೇಕು ಎಂದು ದೇವರಲ್ಲಿ ಬೇಡಲಾಯಿತು.
ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಬಾಳೆಕೋಡಿ ಮಠದ ಶಶಿಕಾಂತ ಮಣಿ ಸ್ವಾಮೀಜಿ ಮತ್ತು ಇತರ ಪ್ರಮುಖರು ಉಪಸ್ಥಿತರಿದ್ದರು.
ಸಂಘ ಪರಿವಾರದ ನಾಯಕರಾದ ಪ್ರಸಾದ್ ಭಂಡಾರಿ, ರಾಜೇಶ್ ಬನ್ನೂರು, ಸಂಜೀವ ಮಠಂದೂರು ಮೊದಲಾದವರು ಸಾಮೂಹಿಕ ಪ್ರಾರ್ಥನೆಯ ನೇತೃತ್ವ ವಹಿಸಿದ್ದರು. ರವೀಶ ತಂತ್ರಿ ದೇವರದಲ್ಲಿ ಪ್ರಾರ್ಥನೆ ಮಾಡಿ ಪ್ರಕರಣಕ್ಕೆ ಸೂಕ್ತ ಇತಿಶ್ರೀ ಹಾಡಬೇಕೆಂದು ಬೇಡಿಕೊಂಡರು.

No comments:

Post a Comment

Vivekananda THENKILA 2025 ಪುತ್ತೂರು ವಿವೇಕಾನಂದ ಶಾಲೆಯಲ್ಲಿ ಸಾಂಪ್ರದಾಯಿಕ ಶೈಲಿಯ...

ಪುತ್ತೂರು ವಿವೇಕಾನಂದ ಶಾಲೆಯಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ  ಶಾಲಾಪ್ರಾರಂಭೋತ್ಸವ.. ದಕ್ಷಿಣಕನ್ನಡ: ರಾಜ್ಯದೆಲ್ಲೆಡೆ ಇಂದಿನಿಂದ ಶಾಲೆಗಳು ಪ್ರಾರಂಭಗೊಂಡಿದೆ. ವಿವಿಧ ಶಾಲ...